ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ

Spread the love

ನಮ್ಮ ಸಿಂಧನೂರು, ಜನವರಿ 25
ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ (ಚೂನಪ್ಪ ಪೂಜೇರಿ ಬಣ) ಅವರ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್‌ ಪಡೆಯಬೇಕು ಹಾಗೂ ಶೀಘ್ರ ಬರಗಾಲ ಪರಿಹಾರ ವಿತರಿಸುವುದು, ಜೋಳದ ಖರೀದಿ ಕೇಂದ್ರಗಳನ್ನು ತೆರೆಯುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒಕ್ಕೊರಲಿನಿಂದ ಹೋರಾಟ ಕೈಗೊಳ್ಳುವ ನಿಟ್ಟಿನಲ್ಲಿ ರೂಪುರೇಷೆ ರೂಪಿಸಲು ವಿಸ್ತೃತವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಾಧ್ಯಕ್ಷರಾದ ಮಹೇಶ್ ಗೌಡ, ಎಂ ಸುಬೇದಾರ್ , ಉಪಾಧ್ಯಕ್ಷ ಸುರೇಶ್ ಪರಗಣ್ಣನವರ, ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ, ಉಪಾಧ್ಯಕ್ಷರಾದ ರಾಮಯ್ಯ ಜವಳಗೇರಾ, ತಿಮ್ಮಣ್ಣ ಬೋವಿ ಸಿಂಧನೂರು, ಮಸ್ಕಿ, ಲಿಂಗಸಗೂರು, ಕುಷ್ಟಗಿ, ಮಾನ್ವಿ, ರಾಯಚೂರು ತಾಲೂಕುಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *