ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಭೆಟ್ಟಿಯಾದ ರಾಜಶೇಖರ ಹಿಟ್ನಾಳ್

Spread the love

(ಪೊಲಿಟಿಕಲ್‌ ನ್ಯೂಸ್‌ : ಬಸವರಾಜ ಹಳ್ಳಿ)
ನಮ್ಮ ಸಿಂಧನೂರು, ಮಾರ್ಚ್ 22
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೈ ನಾಯಕರ ಬಗ್ಗೆ ಮುನಿಸಿಕೊಂಡಿದ್ದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರನ್ನು ಅವರ ನಿವಾಸದಲ್ಲಿ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭೇಟಿಯಾಗಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನನಗೆ ಪಕ್ಷದ ಕೆಲ ನಾಯಕರು ದ್ರೋಹ ಬಗೆಗಿದ್ದಾರೆ ಎಂದು ಅಸಮಾಧಾನಗೊಂಡಿದ್ದ ಇಕ್ಬಾಲ್ ಅನ್ಸಾರಿ ಅವರು ಬಹಿರಂಗವಾಗಿ ಹಲವು ನಾಯಕರ ವಿರುದ್ಧ ಹೇಳಿಕೆ ನೀಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಕೆಲ ದಿನಗಳವರೆಗೆ ಅವರು ರಾಜ್ಯ ನಾಯಕರು ಹಾಗೂ ಜಿಲ್ಲಾ ನಾಯಕರೊಂದಿಗೆ ಅಂತರ ಕಾಯ್ದುಕೊಂಡಿದ್ದರೆAದೇ ಹೇಳಲಾಗಿತ್ತು. ಹಾಗಾಗಿ ಕೈ ಅಭ್ಯರ್ಥಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

Namma Sindhanuru Click For Breaking & Local News

ಸಿಎಂ ಭೇಟಿ ನಂತರ ಮುನಿಸು ಶಮನ
ಇತ್ತೀಚೆಗೆ ಕನಕಗಿರಿ ಉತ್ಸವ ಹಿನ್ನೆಲೆಯಲ್ಲಿ ಕನಕಗಿರಿಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಇಕ್ಬಾಲ್ ಅನ್ಸಾರಿ ಅವರ ಗಂಗಾವತಿ ನಿವಾಸಕ್ಕೆ ಭೇಟಿ ನೀಡಿ ಕೆಲ ಹೊತ್ತು ಚರ್ಚೆ ನಡೆಸಿದ್ದರು. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಮಾಡುವಂತೆ ಸೂಚನೆ ನೀಡಿದ್ದರು ಎಂದು ಹೇಳಲಾಗಿದೆ. ಮುಖ್ಯಮಂತ್ರಿಗಳ ಮನವೊಲಿಕೆ ಹಾಗೂ ಸೂಚನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಇಕ್ಬಾಲ್ ಅನ್ಸಾರಿಯವರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆಂದು ಹೇಳಲಾಗಿದೆ.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *