ಸಿಂಧನೂರು: ಸಿಡಿಲು ಬಡಿದು ಅಮರಾಪುರದ ಯುವಕ ಸಾವು, ಸಚಿವ ತಂಗಡಗಿ, ಶಾಸಕ ಹಂಪನಗೌಡ ಬಾದರ್ಲಿ, ಕಾಂಗ್ರೆಸ್‌ ಅಭ್ಯರ್ಥಿ ಹಿಟ್ನಾಳ್‌ ಭೇಟಿ

Spread the love

ನಮ್ಮ ಸಿಂಧನೂರು , ಏಪ್ರಿಲ್‌ 14
ತಾಲೂಕಿನ ಅಮರಾಪುರ ಗ್ರಾಮದಲ್ಲಿ ಶನಿವಾರ ಸಂಜೆ ಸುರಿದ ಗುಡುಗು ಸಹಿತ ಮಳೆಗೆ ಆಡು ಕಾಯಲು ಹೋಗಿದ್ದ ಯುವಕ ಶಾಂತಕುಮಾರ ಮೃತಪಟ್ಟ ಘಟನೆ ನಡೆದಿದೆ. ಮಧ್ಯಾಹ್ನ ಸಾಧಾರಣವಾಗಿ ಸುರಿದ ಮಳೆ ಸಂಜೆಯಾಗುತ್ತಿದ್ದಂತೆ ಗುಡುಗು-ಮಿಂಚು ಸಹಿತ ಜೋರಾಗಿದೆ. ಏಕಾಏಕಿ ಬಡಿದ ಸಿಡಿಲಿಗೆ ಯುವಕ ಬಲಿಯಾಗಿದ್ದಾನೆ. ಸಿಡಿಲು ಬಡಿದು ಯುವಕ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ, ಸಿಂಧನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶಾಸಕ ಹಂಪನಗೌಡ ಬಾದರ್ಲಿ, ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ಅಮರಾಪುರ ಗ್ರಾಮಕ್ಕೆ ತೆರಳಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಮೃತ ಯುವಕನ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *