ಸಿಂಧನೂರು/ಮಸ್ಕಿ : ಸಿಪಿಐ(ಎಂಎಲ್) ಲಿಬರೇಶನ್ ಪಾರ್ಟಿಯಿಂದ ಕೋಮುವಾದಿ ಬಿಜೆಪಿ ಸೋಲಿಸಿ, ಸಂವಿಧಾನ-ಪ್ರಜಾಪ್ರಭುತ್ವ ರಕ್ಷಿಸಿ ಪ್ರಚಾರಾಂದೋಲನ

Spread the love

ನಮ್ಮ ಸಿಂಧನೂರು, ಎಪ್ರಿಲ್ 28
‘ಇಂಡಿಯಾ’ ಒಕ್ಕೂಟದ ಭಾಗವಾಗಿರುವ ಸಿಪಿಐ(ಎಂಎಲ್) ಲಿಬರೇಶನ್ ಪಾರ್ಟಿ ವತಿಯಿಂದ ಕೊಪ್ಪಳ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಸಿಂಧನೂರು, ಮಸ್ಕಿ ವಿಧಾನಸಭಾ ಕ್ಷೇತ್ರದ ಹಲವು ಹಳ್ಳಿಗಳಲ್ಲಿ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ ರೊಜೊರಿಯೋ, ರಾಜ್ಯ ಸಮಿತಿ ಸದಸ್ಯ ನಾಗರಾಜ್ ಪೂಜಾರ್ ಅವರ ನೇತೃತ್ವದಲ್ಲಿ ಗ್ರಾಮೀಣ ಪ್ರದೇಶಗಳಿಗೆ ತೆರಳಿ “ಕೋಮುವಾದಿ ಬಿಜೆಪಿ ಸೋಲಿಸಿ, ಸಂವಿಧಾನ-ಪ್ರಜಾಪ್ರಭುತ್ವ ರಕ್ಷಿಸಿ” ಎಂಬ ಘೋಷವಾಕ್ಯದೊಂದಿಗೆ ಪ್ರಚಾರಾಂದೋಲನ ನಡೆಸಲಾಗುತ್ತಿದೆ.

Namma Sindhanuru Click For Breaking & Local News

ದುಡಿಯುವ ವರ್ಗದ ಜನರ ಬದುಕನ್ನು ಹಾಗೂ ಸಂವಿಧಾನ, ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಪಕ್ಷವನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು ಹಾಗೂ ಎಲ್ಲ ಸಮುದಾಯಗಳ ಬಡವರು ಒಗ್ಗೂಡಿ ನಿರ್ಣಾಯಕವಾಗಿ ಸೋಲಿಸಿ ‘ಇಂಡಿಯಾ’ ಒಕ್ಕೂಟದ ಅಭ್ಯರ್ಥಿಗೆ ಮತ ನೀಡಬೇಕೆಂಬ ಕರಪತ್ರವನ್ನು ಹಂಚಲಾಯಿತು. ಸಿಂಧನೂರು ತಾಲೂಕಿನ ಅಮರಾಪುರ, ಬೇಳಗುರ್ಕಿ , ವೆಂಕಟೇಶ್ ಕ್ಯಾಂಪ್, ರೈತನಗರಕ್ಯಾಂಪ್, ಕಲಮಂಗಿ, ಭೋಗಾಪುರ, ಗುಂಡ, ಬಳಗಾನೂರು, ಬೆಳ್ಳಿಗಿನೂರು ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಪ್ರಚಾರಾಂದೋಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಸಿಪಿಐಎಂಎಲ್ ಲಿಬರೇಶನ್ ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ, ಮುಖಂಡರಾದ ಆರ್.ಎಚ್ ಕಲಮಂಗಿ, ಪರುಶುರಾಮ ಭಂಡಾರಿ, ಮಹಾದೇವ, ಪಂಪಾಪತಿ ಬೆಳಗುರ್ಕಿ, ಹನುಮಂತ ಟೈಲರ್, ಸೋಮಲಾಪುರ ಸೇರಿದಂತೆ ಇನ್ನಿತರರಿದ್ದರು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *