ಸಿಂಧನೂರು: ಡಿವೈಡರ್‌ಗೆ ಡಿಕ್ಕಿ ಹೊಡೆದು ಸಾರಿಗೆ ಬಸ್ ಪಲ್ಟಿ, ಚಾಲಕ/ನಿರ್ವಾಹಕ ಸಾವು

Spread the love

ನಮ್ಮ ಸಿಂಧನೂರು, ಜುಲೈ 12
ನಗರದ ಗಂಗಾವತಿ ರಸ್ತೆಯಲ್ಲಿರುವ ಹಿರೋ ಶೋ ರೂಮ್ ಎದುರು ಡಿವೈಡರ್‌ಗೆ ರಾಯಚೂರು ಡಿಪೋದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ/ನಿರ್ವಾಹಕ ರಾಚಪ್ಪ (41) ಸ್ಥಳದಲ್ಲೇ ಮೃತಪಟ್ಟು ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗಿನ ಜಾವ 3 ಗಂಟೆ ಸುಮಾರು ನಡೆದಿದೆ. ಪ್ರಯಾಣಿಕರನ್ನು ಹತ್ತಿಸಿಕೊಂಡು ಹುಬ್ಬಳ್ಳಿದ ಹೊರಟಿದ್ದ ಸ್ಲೀಪರ್ ಕೋಚ್ ಬಸ್ ಅಪಘಾತಕ್ಕೀಡಾಗಿದೆ. ಅಪಘಾತದ ಭೀಕರತೆಗೆ ಬಸ್ ಪಲ್ಟಿಯಾಗಿ ಮುಂಭಾಗ ನಜ್ಜುಗುಜ್ಜಾಗಿದೆ. ಹೆದ್ದಾರಿಯ ಮೇಲೆ ಬಸ್ ಪಲ್ಟಿಯಾಗಿದ್ದರಿಂದ, ವಾಹನ ದಟ್ಟಣೆ ನಿಯಂತ್ರಿಸಲು ಅಪಘಾತಕ್ಕೀಡಾದ ಬಸ್‌ನ್ನು ಟ್ರಾಫಿಕ್ ಪೊಲೀಸ್ ಠಾಣೆಯವರು ಬೇರೆಡೆ ಸಾಗಿಸಿದ್ದಾರೆ. ಅಪಘಾತ ಸಂಭವಿಸಿದ ಸಂದರ್ಭದಲ್ಲಿ 7 ಜನ ಪ್ರಯಾಣಿಕರು ಬಸ್‌ನಲ್ಲಿ ಇದ್ದರು ಎಂದು ಹೇಳಲಾಗಿದೆ. ಅದರಲ್ಲಿ ಒಬ್ಬ ಪ್ರಯಾಣಿಕರಿಗೆ ತಲೆಗೆ ಪೆಟ್ಟಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಚಿಕಿತ್ಸೆ ಪಡೆದ ತದನಂತರ ಮನೆಗೆ ತೆರೆಳಿದ್ದಾರೆ ಎಂದು ತಿಳಿದುಬಂದಿದೆ.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *