ಬಳಗಾನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಯಕಲ್ಪ ಪ್ರಶಸ್ತಿ ಆರೋಗ್ಯ ಸಚಿವರಿಂದ 2 ಲಕ್ಷ ರೂ.ಬಹುಮಾನ

Spread the love

ನಮ್ಮ ಸಿಂಧನೂರು, ಫೆಬ್ರವರಿ 7
ಮಸ್ಕಿ ತಾಲೂಕಿನ ಬಳಗಾನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಸಕ್ತ ಸಾಲಿನಲ್ಲಿ ಕಾಯಕಲ್ಪ ಪ್ರಶಸ್ತಿ ದೊರೆತಿದ್ದು, ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬಳಗಾನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯವರ ತಂಡಕ್ಕೆ ಪ್ರಶಸ್ತಿ ಪತ್ರ ಹಾಗೂ 2 ಲಕ್ಷ ರೂ.ಬಹುಮಾನ ವಿತರಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಳಗಾನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ 26 ಗ್ರಾಮಗಳು ಒಳಪಟ್ಟಿವೆ. ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡಿಕೊಂಡು, ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿದ್ದನ್ನು ಪರಿಗಣಿಸಿ 2022-23ನೇ ಸಾಲಿನಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಜಿಲ್ಲೆಗೆ ಮೊದಲ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ಸಾಧನೆ ಮಾಡಿದೆ. ಆರೋಗ್ಯ ಕೇಂದ್ರವನ್ನು ಸುವ್ಯವಸ್ಥಿತವಾಗಿಟ್ಟುಕೊಂಡು ಜನರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸುವ ಮೂಲಕ ಪ್ರಶಂಸೆಗೆ ಪಾತ್ರವಾಗಿರುವ ಆರೋಗ್ಯ ಕೇಂದ್ರದ ವೈದ್ಯ ಡಾ.ದೌಲಸಾಬ ಮುದ್ದಾಪುರ ಹಾಗೂ ಮಹಿಳಾ ಶುಶ್ರೂಷಕಿಯರು ಮತ್ತು ಆರೋಗ್ಯ ಸಿಬ್ಬಂದಿಯವರ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *