ಕೆ.ವಿರೂಪಾಕ್ಷಪ್ಪ ಅವರನ್ನು ಭೇಟಿ ಮಾಡಿದ ಕೊಪ್ಪಳ ಬಿಜೆಪಿ ಅಭ್ಯರ್ಥಿ

Spread the love

ನಮ್ಮ ಸಿಂಧನೂರು, ಮಾರ್ಚ್ 15
ಬಿಜೆಪಿ ಹೈಕಮಾಂಡ್ ತಮ್ಮನ್ನು ಅಭ್ಯರ್ಥಿಯಾಗಿ ಘೋಷಿಸಿದ್ದೇ ತಡ ಡಾ.ಬಸವರಾಜ್ ಕ್ಯಾವಟರ್ ಅವರು ಕ್ಷೇತ್ರದಾದ್ಯಂತ ಓಡಾಟ ಚುರುಕುಗೊಳಿಸಿದ್ದಾರೆ. ಮಾಜಿ ಸಂಸದ ಹಾಗೂ ಬಿಜೆಪಿಯ ಹಿರಿಯ ನಾಯಕ ಸಿಂಧನೂರಿನ ಕೆ.ವಿರೂಪಾಕ್ಷಪ್ಪ ಅವರ ನಿವಾಸಕ್ಕೆ ಶುಕ್ರವಾರ ದಿಢೀರ್ ಭೇಟಿಕೊಟ್ಟು ಅವರು ಕೆಲವೊತ್ತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ನಿರುಪಾದೆಪ್ಪ ಜೋಳದರಾಶಿ, ರಾಜೇಶ್ ಹಿರೇಮಠ ಸೇರಿದಂತೆ ಇನ್ನಿತರೆ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಗುರುವಾರ ಕೊಪ್ಪಳ ಕಾರ್ಯಾಲಯದಲ್ಲಿ ಸಂಗಣ್ಣ ಕರಡಿ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ತಮ್ಮ ಬೆಂಬಲಿಗರು, ಮುಖಂಡರೊಂದಿಗೆ ಮಾಜಿ ಸಂಸದರ ನಿವಾಸಕ್ಕೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.


Spread the love

Leave a Reply

Your email address will not be published. Required fields are marked *