‘ಕೇಂದ್ರ ರಾಯಚೂರಿಗೆ ಏಮ್ಸ್ ಮಂಜೂರು ಮಾಡಲಿ’ ಸಿಎಂಗೆ ರವಿ ಭೋಸರಾಜು ಮನವಿ

Spread the love

ನಮ್ಮ ಸಿಂಧನೂರು, ಜನವರಿ 29
ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಗೆ 2024-25ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಏಮ್ಸ್ ಮಂಜೂರು ಮಾಡಲು, ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಗಮನ ಸೆಳೆಯುವಂತೆ ಒತ್ತಾಯಿಸಿ, ಕಾಂಗ್ರೆಸ್ ಯುವ ಮುಖಂಡ ರವಿ ಭೋಸರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ ಅವರನ್ನು ಭೇಟಿಯಾದ ಅವರು, ಜಿಲ್ಲೆಯಲ್ಲಿ ಏಮ್ಸ್ ಹೋರಾಟ ಸಮಿತಿ ಕಳೆದ 625ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿದ್ದು, ಅಲ್ಲದೇ ಕೇಂದ್ರ ಸಚಿವ ಮನ್‌ಸುಖ್ ಮಾಂಡವೀಯ ಅವರನ್ನೂ ಭೇಟಿ ಮಾಡಿ, ರಾಯಚೂರು ಜಿಲ್ಲೆಗೆ ಏಮ್ಸ್ ಅವಶ್ಯಕತೆ ಇರುವುದನ್ನು ಮನವರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಏಮ್ಸ್ ಸಂಸ್ಥೆಯನ್ನು ಆದಷ್ಟು ಮಂಜೂರು ಮಾಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಅವರು ಮನವಿ ಮಾಡಿದ್ದಾರೆಂದು ಮೂಲಗಳು ‘ನಮ್ಮ ಸಿಂಧನೂರು’ಗೆ ತಿಳಿಸಿವೆ.


Spread the love

Leave a Reply

Your email address will not be published. Required fields are marked *