ಅದ್ಧೂರಿಯಾಗಿ ಜರುಗಿದ ಅಂಬಾದೇವಿ ಜಾತ್ರೆ

Spread the love

ನಮ್ಮ ಸಿಂಧನೂರು, ಜನವರಿ 25
ತಾಲೂಕಿನ ಸುಕ್ಷೇತ್ರ ಸೋಮಲಾಪುರದ ಅಂಬಾದೇವಿ ಮಠದಲ್ಲಿ ಅಂಬಾದೇವಿ ಜಾತ್ರಾ ಮಹೋತ್ಸವ ಗುರುವಾರ ಅದ್ಧೂರಿಯಾಗಿ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ರಥೋತ್ಸವದ ಹಿನ್ನೆಲೆಯಲ್ಲಿ ರಾಯಚೂರು ಸೇರಿದಂತೆ ಬಳ್ಳಾರಿ, ಕೊಪ್ಪಳ, ಕಲಬುರಗಿ, ಚಿತ್ರದುರ್ಗ, ವಿಜಯನಗರ ಸೇರಿದಂತೆ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಭಕ್ತರು ಭಾಗವಹಿಸಿ ದೇವಿಗೆ ಕೃಪೆಗೆ ಪಾತ್ರರಾದರು. ಜಾತ್ರಾ ಮಹೋತ್ಸವದ ನಿಮಿತ್ತ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಶಾಸಕ ವೆಂಕಟರಾವ್‌ ನಾಡಗೌಡ, ಬಿಜೆಪಿ ಮುಖಂಡ ಕೆ.ಕರಿಯಪ್ಪ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಮರೇಗೌಡ ವಿರುಪಾಪುರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪಂಪನಗೌಡ ಬಾದರ್ಲಿ, ತಹಸೀಲ್ದಾರ್‌ ಅರುಣ್‌ ಕುಮಾರ್‌ ದೇಸಾಯಿ ಸೇರಿದಂತೆ ಇನ್ನಿತರರು ಇದ್ದರು.

Namma Sindhanuru Click For Breaking & Local News

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *