ಸಿಂಧನೂರು: ಗೊರೇಬಾಳದಲ್ಲಿ ಕಾಂಗ್ರೆಸ್ ʼಸ್ತ್ರೀಶಕ್ತಿ’ ಬಲ ಪ್ರದರ್ಶನ

Spread the love

ನಮ್ಮ ಸಿಂಧನೂರು, ಎಪ್ರಿಲ್ 23
ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿದ್ದ ಸಭೆ ಸ್ತ್ರೀಶಕ್ತಿ ಬಲ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ, ಮಾಸಿಕ ೨೦೦೦ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ, ಉಚಿತ ವಿದ್ಯುತ್ ಸೇರಿದಂತೆ ಪಂಚ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡಿ, ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರ ಪರ ಮತಯಾಚನೆ ಮಾಡಿದರು. ಈ ಸಂದರ್ಭದಲಿ ಗೊರೇಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಕಾಂಗ್ರೆಸ್ ಪದಾಧಿಕಾರಿಗಳು ಇದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *