ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ನೇಮಕ

Spread the love

ನಮ್ಮ ಸಿಂಧನೂರು, ಏಪ್ರಿಲ್ 2
ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಹಾಗೂ ಕುಷ್ಟಗಿ ಕ್ಷೇತ್ರದ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರನ್ನು ನೇಮಕ ಮಾಡಿ ಕೆಪಿಸಿಸಿ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆಯ ಹೊತ್ತಲ್ಲಿ ಈ ಆದೇಶ ಹೊರಡಿಸುವ ಮೂಲಕ ಹೈಕಮಾಂಡ್ ಲಿಂಗಾಯತ ಸಮುದಾಯದ ಮುಖಂಡನಿಗೆ ಮಣೆ ಹಾಕಿದೆ ಎಂದು ಹೇಳಲಾಗುತ್ತಿದೆ.
ಲಿಂಗಸುಗೂರು, ಕುಷ್ಟಗಿ ಕ್ಷೇತ್ರದ ಶಾಸಕರಾಗಿ ಅಲ್ಲದೇ ಒಂದು ಬಾರಿ ಸಚಿವರಾಗಿ ಅನುಭವ ಹೊಂದಿರುವ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರು ಕೊಪ್ಪಳ ಹಾಗೂ ರಾಯಚೂರು ಲೋಕಸಭೆ ಕ್ಷೇತ್ರಗಳೆರಡರಲ್ಲೂ ಪ್ರಭಾವ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಬಲ ಹೆಚ್ಚಿಸಿಕೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ.


Spread the love

Leave a Reply

Your email address will not be published. Required fields are marked *