ಕೊಪ್ಪಳ ಲೋಕ ಕಣ : ಬಿಜೆಪಿ ಕಾರ್ಯಕರ್ತರ ಪಕ್ಷಾಂತರ ಪರ್ವ, ಸಂಗಣ್ಣ ಕರಡಿಯವರ ನೇತೃತ್ವದಲ್ಲಿ ಹಲವರು ಕಾಂಗ್ರೆಸ್ ಸೇರ್ಪಡೆ

Spread the love

ನಮ್ಮ ಸಿಂಧನೂರು, ಏಪ್ರಿಲ್ 18
ಹಾಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸಂಗಣ್ಣ ಕರಡಿ ಅವರು ಸೇರ್ಪಡೆಗೊಂಡ ನಂತರ ಕೊಪ್ಪಳ ಜಿಲ್ಲೆಯ ಹಲವೆಡೆ ಪಕ್ಷಾಂತರ ಪರ್ವ ಶುರುವಾಗಿದ್ದು, ಸಂಗಣ್ಣ ಕರಡಿ ಅವರ ಬೆಂಬಲಿಗರು, ಅಭಿಮಾನಿಗಳು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಯಾಗುತ್ತಿದ್ದಾರೆ. ಕೊಪ್ಪಳ ಮತಕ್ಷೇತ್ರದ ಕಲಿಕೇರಿ, ಚಿಲವಾಡಗಿ ಹಾಗೂ ನರೇಗಲ್ ಗ್ರಾಮದ ಹಲವು ಮುಖಂಡರುಗಳು ಸಂಸದರಾದ ಕರಡಿ ಸಂಗಣ್ಣ ರವರ ನಿವಾಸದಲ್ಲಿ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಈ ವೇಳೆ ಅಮರೇಶ್ ಕರಡಿ, ಗವಿಸಿದ್ದಪ್ಪ ಕರಡಿ, ಪ್ರಸನ್ನ ಗಡಾದ್, ಜನಾರ್ದನ ಹುಲಿಗಿ ಸೇರಿದಂತೆ ಹಲವು ಮುಖಂಡರುಗಳು ಉಪಸ್ಥಿತರಿದ್ದರು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *