ಕೊಪ್ಪಳ ಎಂಪಿ ಕ್ಷೇತ್ರ: ಬ್ಯಾಟ್ ಬೀಸಿದ ಬಿಜೆಪಿ ಅಭ್ಯರ್ಥಿ, ಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಹುರಿಯಾಳು

Spread the love

ನಮ್ಮ ಸಿಂಧನೂರು, ಮಾರ್ಚ್ 28
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಜೋರಾಗಿದೆ. ಸಿಂಧನೂರಿನ ತಾಲೂಕಾ ಕ್ರೀಡಾಂಗಣದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ.ಎಸ್.ಕ್ಯಾವಟರ್ ಅವರು ಸ್ಥಳೀಯ ಯುವಕರೊಂದಿಗೆ ಕ್ರಿಕೆಟ್ ಆಟದಲ್ಲಿ ಪಾಲ್ಗೊಂಡು ಬ್ಯಾಟ್ ಬೀಸಿದರು. ಈ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಆಟದಲ್ಲಿ ತೊಡಗಿದ್ದ ಯುವಕರೊಂದಿಗೆ ಕೆಲಕ್ಷಣ ಕಳೆದರು. ಇನ್ನೂ ಕಾಂಗ್ರೆಸ್ ಅಭ್ಯರ್ಥಿ ವಿವಿಧ ಗ್ರಾಮಗಳಿಗೆ ಬೆಳಗ್ಗೆಯಿಂದಲೇ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಾದಿಮನಾಳು ಶಾಖಾಮಠದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜೀಗಳ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *