ಬಿಜೆಪಿ ಅಭ್ಯರ್ಥಿಯಿಂದ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಭೇಟಿ

Spread the love

ನಮ್ಮ ಸಿಂಧನೂರು, ಮಾರ್ಚ್ 24
ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಎಸ್ ಕ್ಯಾವಟರ್ ಅವರು ಮಾಜಿ ಸಚಿವ ಹಾಗೂ ಜೆಡಿಎಸ್‌ನ ಹಿರಿಯ ನಾಯಕ ವೆಂಕಟರಾವ್ ನಾಡಗೌಡ ಅವರನ್ನು ಸಿಂಧನೂರಿನ ಅವರ ನಿವಾಸದಲ್ಲಿ ಶನಿವಾರ ಭೇಟಿಯಾಗಿ ಕೆಲಕಾಲ ಚರ್ಚಿಸಿದರು.ಬಿಜೆಪಿ ಮೈತ್ರಿ ಧರ್ಮ ಪಾಲಿಸುತ್ತಿಲ್ಲ, ತನ್ನದೇ ಶಕ್ತಿ ಸಾಮರ್ಥ್ಯ ಹೊಂದಿರುವ ಜೆಡಿಎಸ್ ನಾಯಕರನ್ನು ಕಡೆಗಣಿಸುತ್ತಿದೆ ಎಂಬ ಬಗ್ಗೆ ರಾಜ್ಯ ಹಾಗೂ ಸ್ಥಳೀಯ ಮಟ್ಟದಲ್ಲಿ ಚರ್ಚೆಗಳು ಶುರುವಾದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ವೆಂಕಟರಾವ್ ನಾಡಗೌಡ ಅವರನ್ನು ಖುದ್ದು ಭೇಟಿಯಾಗುವ ಮೂಲಕ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಲಹೆ, ಸೂಚನೆಗಳನ್ನು ನೀಡಿ ಮಾರ್ಗದರ್ಶನ ಮಾಡುವಂತೆ ಕೇಳಿಕೊಂಡಿರುವುದು, ಜೆಡಿಎಸ್‌ನಲ್ಲಿನ ಮುನಿಸು ಶಮನಕ್ಕೆ ಯತ್ನಿಸಿದಂತಿದೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಈ ಸಂದರ್ಭದಲ್ಲಿ ಬಿಜೆಪಿ ಹಲವು ಮುಖಂಡರು, ಜೆಡಿಎಸ್ ನಾಯಕರು ಸೇರಿದಂತೆ ಹಲವರು ಇದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *