ಕೊಪ್ಪಳ ಲೋಕಸಭಾ ಕ್ಷೇತ್ರ: ಆಂಜನೇಯನ ಮೊರೆ ಹೋದ ಕೈ-ಕಮಲ ಅಭ್ಯರ್ಥಿಗಳು !

Spread the love

ನಮ್ಮ ಸಿಂಧನೂರು, ಮಾರ್ಚ್ 30
ಲೋಕಸಭಾ ಚುನಾವಣೆಯ ಮತದಾನಕ್ಕೆ ಇನ್ನೂ 38 ದಿನ ಬಾಕಿ ಉಳಿದಿರುವ ಬೆನ್ನಲ್ಲೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಆಂಜನೇಯ ಸ್ವಾಮಿಯ ಮೊರೆ ಹೋಗಿದ್ದು, ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
ಶನಿವಾರ ಬೆಳಿಗ್ಗೆಯೇ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ತಮ್ಮ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಆನೆಗೊಂದಿ ಸಮೀಪದ ಅಂಜನಾದ್ರಿಯ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇನ್ನೂ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ತಮ್ಮ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಕೊಪ್ಪಳ ತಾಲೂಕಿನ ಇಂದರಗಿಯ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *