ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಶ್ರೀದೇವಿ ರಾಗಲಪರ್ವಿ

Spread the love

ನಮ್ಮ ಸಿಂಧನೂರು, ಫೆಬ್ರವರಿ 25
ತಾಲೂಕಿನ ರಾಗಲಪರ್ವಿ ಗ್ರಾಮದ ಶ್ರೀದೇವಿ ಅವರು ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ತೋರಿದ್ದಾರೆ. ಕಳೆದ ನವೆಂಬರ್‌ನಲ್ಲಿ ಹೈಕೋರ್ಟ್‌ ಸಿವಿಲ್ ನ್ಯಾಯಾಧೀಶರ ಹುದ್ದೆ ನೇಮಕಾತಿಗೆ ಮುಖ್ಯ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಶ್ರೀದೇವಿ ಅವರು ತೇರ್ಗಡೆಯಾಗಿದ್ದು, 23-02-2024ರಂದು ಹೈಕೋರ್ಟ್ ಅಂತಿಮ ಪಟ್ಟಿ ಬಿಡುಗಡೆ ಮಾಡಿದ್ದು, ಶ್ರೀದೇವಿಯವರು ಆಯ್ಕೆಯಾಗಿದ್ದಾರೆ. ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಶ್ರೀದೇವಿ ರಾಗಲಪರ್ವಿ ಅವರು ಆಯ್ಕೆಯಾದ ಬಗ್ಗೆ ಗ್ರಾಮಸ್ಥರು ಹಾಗೂ ಕುಟುಂಬಸ್ಥರಿಗೆ ಗೊತ್ತಾಗುತ್ತಿದ್ದಂತೆ ಹರ್ಷದ ವಾತಾವರಣ ಕಂಡುಬಂತು. ಗ್ರಾಮೀಣ ಪ್ರದೇಶದ ಪ್ರತಿಭೆಯಾದ ಶ್ರೀದೇವಿಯವರು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪೂರೈಸುವ ಮೂಲಕ ಅತ್ಯಂತ ಪರಿಶ್ರಮಪಟ್ಟು ಅತ್ಯುತ್ತಮ ಸಾಧನೆ ಮಾಡಿದ್ದಾರೆ.


Spread the love

Leave a Reply

Your email address will not be published. Required fields are marked *