ಕೊಪ್ಪಳ ಎಂಪಿ ಕ್ಷೇತ್ರ: ಪ್ರಚಾರ ಕಾರ್ಯದಲ್ಲಿ ಒಗ್ಗರಣೆ ಸವಿದ ಕೈ ಅಭ್ಯರ್ಥಿ, ಕಾರ್ಯಕರ್ತರು

Spread the love

(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)
ನಮ್ಮ ಸಿಂಧನೂರು, ಮಾರ್ಚ್ 27

ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆಯಾ ಪಕ್ಷದ ಅಭ್ಯರ್ಥಿಗಳು ಉರಿಬಿಸಿಲಿನಲ್ಲೂ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಿ ಎಡೆಬಿಡದೇ ಭೇಟಿ ನೀಡುತ್ತಿದ್ದಾರೆ. ಕುಷ್ಟಗಿ ತಾಲೂಕಿನ ಎಂ.ಗುಡದೂರಿಗೆ ಪ್ರಚಾರ ಕಾರ್ಯಕ್ಕೆ ತೆರಳಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಸೇರಿದಂತೆ ಅವರ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಬಿಸಿ ಬಿಸಿ ಒಗ್ಗರಣೆ ಸವಿದರು. ಬೇಸಿಗೆಯ ಬಿಸಿಲು ಮಧ್ಯಾಹ್ನ 40 ಡಿಗ್ರಿ ಸೆಲ್ಸಿಯಸ್ ದಾಟುತ್ತಿದ್ದು, ಉರಿಬಿಸಿಲಲ್ಲೂ ಕಾಂಗ್ರೆಸ್‌ನಿಂದ ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ.


Spread the love

Leave a Reply

Your email address will not be published. Required fields are marked *