ಸಿಂಧನೂರು: ಕಾಂಗ್ರೆಸ್‌ ಎಂಪಿ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌, ಶಾಸಕ ಹಂಪನಗೌಡ ಬಾದರ್ಲಿ ಒಳಬಳ್ಳಾರಿ ಶ್ರೀಗಳ ಭೇಟಿ

Spread the love

ನಮ್ಮ ಸಿಂಧನೂರು, ಏಪ್ರಿಲ್‌ 11
ತಾಲೂಕಿನ ಸುಕ್ಷೇತ್ರ ಶ್ರೀ ಒಳಬಳ್ಳಾರಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌ ಹಾಗೂ ಶಾಸಕ ಹಂಪನಗೌಡ ಬಾದರ್ಲಿ ಅವರು ಬುಧವಾರ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಬಿಡುವಿಲ್ಲದೇ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಅಪಾರ ಬೆಂಬಲಿಗರು, ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಶ್ರೀಮಠಕ್ಕೆ ಭೇಟಿ ನೀಡಿದ ಅವರು ಶ್ರೀಗಳ ಆಶೀರ್ವಾದ ಪಡೆದುಕೊಂಡು ಪ್ರಚಾರಕ್ಕೆ ತೆರಳಿದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *