ಕೊಪ್ಪಳ ಲೋಕಸಭಾ ಕಣ: ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ನಾಮಪತ್ರ ಸಲ್ಲಿಕೆ ಮುನ್ನ ಬೃಹತ್ ಮೆರವಣಿಗೆ

Spread the love

ನಮ್ಮ ಸಿಂಧನೂರು, ಏಪ್ರಿಲ್ 16
ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಅಪಾರ ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ಹಾಗೂ ಮುಖಂಡರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗಿದರು. ಮೆರೆವಣಿಗೆಯ ಉದ್ದಕ್ಕೂ ಅಪಾರ ಸಂಖ್ಯೆಯ ಜನಸ್ತೋಮ ಕಂಡುಬಂತು. ಕಾರ್ಯಕರ್ತರು ಪಕ್ಷದ ಧ್ವಜಗಳನ್ನು ಹಿಡಿದು, ಕಾಂಗ್ರೆಸ್ ಪರ ಘೋಷಣೆಗಳನ್ನು ಹಾಕಿದರು. ಸಚಿವರಾದ ಜಮೀರ್ ಅಹ್ಮದ್, ಶಿವರಾಜ ತಂಗಡಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಸೇರಿದಂತೆ, 8 ವಿಧಾನಸಭಾ ಕ್ಷೇತ್ರದ ಶಾಸಕರು, ವಿವಿಧ ಘಟಕದ ಪದಾಧಿಕಾರಿಗಳು ಸೇರಿದಂತೆ, ರಾಜ್ಯ ಮುಖಂಡರು, ನಿಗಮ ಮಂಡಳಿಗಳ ಪದಾಧಿಕಾರಿಗಳು ಭಾಗಿಯಾದರು.

Namma Sindhanuru Click For Breaking & Local News
Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *