ಸಿಂಧನೂರು : ಸಾಲಗುಂದಾದಲ್ಲಿ ಅನಿಲ್‌ಕುಮಾರ್ ವೈ ನೇತೃತ್ವದಲ್ಲಿ ಕಾಂಗ್ರೆಸ್‌ನಿಂದ ಮನೆ ಮನೆಗೆ ಗ್ಯಾರಂಟಿ ಅಭಿಯಾನ

Spread the love

ನಮ್ಮ ಸಿಂಧನೂರು, ಏಪ್ರಿಲ್ 10
ತಾಲೂಕಿನ ಸಾಲಗುಂದಾ ಗ್ರಾಮದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅನಿಲ್‌ಕುಮಾರ್ ವೈ. ಇವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಕುರಿತು ಪ್ರಚಾರ ನಡೆಸಲಾಯಿತು. ಅಲ್ಲದೇ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಹಾಗೂ ಕೇಂದ್ರದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ವಿವಿಧ ಗ್ಯಾರಂಟಿಗಳ ಕುರಿತು ಮತದಾರರಿಗೆ ಮನವರಿಕೆ ಮಾಡಿಕೊಡಲಾಯಿತು. ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರ ಪರ ಮತಯಾಚನೆ ಮಾಡಲಾಯಿತು. ಈ ವೇಳೆ ಬ್ಲಾಕ್ ಕಾಂಗ್ರೆಸ್‌ನ ಶರಣಬಸವ ವಕೀಲರು ಸೇರಿದಂತೆ ಕಾರ್ಯಕರ್ತರು ಇನ್ನಿತರರು ಇದ್ದರು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *