ನಮ್ಮ ಸಿಂಧನೂರು, ಡಿಸೆಂಬರ್ 28
ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ, ನಿರ್ಮಲ ತುಂಗಭದ್ರಾ ಅಭಿಯಾನ ಸಮಿತಿ ಕರ್ನಾಟಕ ಹಾಗೂ ಪರ್ಯಾವರಣ ಟ್ರಸ್ಟ್ (ರಿ) ಶಿವಮೊಗ್ಗದ ವತಿಯಿಂದ ಹಮ್ಮಿಕೊಂಡಿರುವ ನಿರ್ಮಲ ತುಂಗಭದ್ರಾ ಅಭಿಯಾನದ 3ನೇ ಹಂತದ ಜಲಜಾಗೃತಿ-ಜನಜಾಗೃತಿ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶ್ರೀರಾಮನಗರದ ಶ್ರೀಮತಿ ಎ.ಕೆ.ಆರ್.ದೇವಿ ಸ್ಮಾರಕ ಪದವಿ ಪೂರ್ವ ಕಾಲೇಜ್ (ವಿಜ್ಞಾನ & ವಾಣಿಜ್ಯ) ವಿದ್ಯಾರ್ಥಿಗಳು ಬೃಹತ್ ಜಾಥಾದಲ್ಲಿ ಭಾಗವಹಿಸಿ ಜನಜಾಗೃತಿ ಮೂಡಿಸಿದರು. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿಯಾದ ಬಸವರಾಜ.ಬಿ ಅವರನ್ನು ಜಾಥಾದಲ್ಲಿ ಭಾಗವಹಿಸಿದ್ದ ಶ್ರೀಗಳು ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
