ಸಿರುಗುಪ್ಪ : ರಾಜಶೇಖರ ಹಿಟ್ನಾಳ್ ಪರ ಹಂಪನಗೌಡ ಬಾದರ್ಲಿ ಬಿರುಸಿನ ಪ್ರಚಾರ

Spread the love

ನಮ್ಮ ಸಿಂಧನೂರು, ಏಪ್ರಿಲ್ 15
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರ ಪರ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರು ಸಿರುಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಗಸನೂರು ಜಿಲ್ಲಾ ಪಂಚಾಯಿತಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಬಹಿರಂಗ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಿರಗುಪ್ಪ ಕ್ಷೇತ್ರದ ಶಾಸಕ ಬಿ.ಎಂ.ನಾಗರಾಜ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕರಿಬಸಪ್ಪ, ಮಾಜಿ ಶಾಸಕ ಚಂದ್ರುಸ್ವಾಮಿ, ಮುಖಂಡರಾದ ವಕೀಲ್ ಮಲ್ಲೇಸ್ವಾಮಿ, ಗ್ರಾ.ಪಂ.ಅಧ್ಯಕ್ಷರಾದ ಜಯರಾಮರೆಡ್ಡಿ, ಚೊಕ್ಕ ಬಸನಗೌಡ, ಅಗಸನೂರು ಗೋಪಾಲರೆಡ್ಡಿ, ಖಲೀಲ್‌ಸಾಬ, ಕೇಶಪ್ಪ, ಮಲ್ಲರೆಡ್ಡಿ ಗೌಡ್ರು, ಮಂಜುನಾಥ ರೆಡ್ಡಿ ಸಾಹುಕಾರ ಸೇರಿದಂತೆ ಇನ್ನಿತರರು ಇದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *