ಕೊಪ್ಪಳ ಲೋಕ ಕಣ : ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಹರಸಿ ಅಭಿಮಾನಿಯಿಂದ ದೀಡ್ ನಮಸ್ಕಾರ !

Spread the love

(ಪೊಲಿಟಿಕಲ್ ನ್ಯೂಸ್: ಬಸವರಾಜ ಹಳ್ಳಿ)
ನಮ್ಮ ಸಿಂಧನೂರು, ಎಪ್ರಿಲ್ 24

ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ರಾಜಶೇಖರ್ ಹಿಟ್ನಾಳ್ ಅವರು ಚುನಾವಣೆಯಲ್ಲಿ ವಿಜಯಶಾಲಿಯಾಗಲಿ ಎಂದು ಹರಸಿ, ಕೊಪ್ಪಳ ನಗರದ ವಾರ್ಡ್ ನಂ.30ರ ನಿವಾಸಿ ಬಸ್ಸಪ್ಪ ಇಂದ್ರಮ್ಮನವರ್ ಎಂಬುವವರು ಬುಧವಾರ ಅದೇ ವಾರ್ಡ್ನಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ದೀಡ್ ನಮಸ್ಕಾರ ಹಾಕುವ ಮೂಲಕ ಅಭಿಮಾನ ಮೆರೆದಿರುವ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಕೊಪ್ಪಳ ಮಾಜಿ ಸಂಸದ ಸಂಗಣ್ಣ ಕರಡಿ, ಹಾಲಿ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್, ಮಾಜಿ ಎಮ್ಮೆಲ್ಸಿ ಎಚ್‌.ಆರ್‌.ಶ್ರೀನಾಥ್‌, ಮುಖಂಡ ಅಮರೇಶ ಕರಡಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *