Spread the love

ನಮ್ಮ ಸಿಂಧನೂರು, ಜುಲೈ 12
ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಕಂಪನಿಯ ಗಣಿಯಲ್ಲಿ ಶುಕ್ರವಾರ ಬೆಳಗಿನ ಜಾವ ಭೂಕುಸಿತ ಉಂಟಾಗಿ ಒಬ್ಬ ಕಾರ್ಮಿಕ ಮೃತಪಟ್ಟು ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮೃತ ಕಾರ್ಮಿಕನಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಬೇಕು ಎಂದು ಟಿಯುಸಿಐ ರಾಜ್ಯ ಸಮಿತಿ ಅಧ್ಯಕ್ಷ ಎಂ.ಡಿ.ಅಮೀರ ಅಲಿ ಹಾಗೂ ರಾಜ್ಯ ಉಪಾಧ್ಯಕ್ಷ ಎಂ.ಗಂಗಾಧರ ಆಗ್ರಹಿಸಿದ್ದಾರೆ.
ಈ ಕುರಿತು ಶುಕ್ರವಾರ ಹೇಳಿಕೆ ನೀಡಿರುವ ಅವರು, ಚಿನ್ನದ ಗಣಿಯ ಮಲ್ಲಪ್ಪ ಶಾಫ್ಟ್ ವಿಭಾಗದಲ್ಲಿ ದುರ್ಘಟನೆ ಸಂಭವಿಸಿದ್ದು, ಕಾರ್ಮಿಕ ಮೌನೇಶ್ (48) ಮೃತಪಟ್ಟಿದ್ದಾರೆ. ನಾವಲ್ವರು ಗಾಯಗೊಂಡಿದ್ದಾರೆ. ಗಾಯಾಳು ಕಾರ್ಮಿಕರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ. ಹಾಗಾಗಿ ಮೃತ ಕಾರ್ಮಿಕ ಹಾಗೂ ಗಾಯಗೊಂಡವರಿಗೆ ಹೆಚ್ಚಿನ ಪರಿಹಾರ ಘೋಷಿಸಬೇಕು ಎಂದು ಸರ್ಕಾರ ಹಾಗೂ ಗಣಿ ಕಂಪನಿಯನ್ನು ಅವರು ಒತ್ತಾಯಿಸಿದ್ದಾರೆ

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *