ಸಿಂಧನೂರು: ಮಾದಿಗ, ಚಲುವಾದಿ ಸಮಾಜದ ಸಭೆಯಲ್ಲಿ ಬೆಂಬಲ ಕೋರಿದ ಕಾಂಗ್ರೆಸ್

Spread the love

ನಮ್ಮ ಸಿಂಧನೂರು, ಏಪ್ರಿಲ್ 11
ನಗರದಲ್ಲಿ ನಡೆದ ಮಾದಿಗ ಮತ್ತು ಚಲವಾದಿ ಸಮಾಜದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಹಂಪನಗೌಡ ಬಾದರ್ಲಿ, ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರು ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಹಲವು ಅಭಿವೃದ್ಧಿಪರ ಹಾಗೂ ದಲಿತಪರ ಯೋಜನೆಗಳ ಕುರಿತು ಮಾತನಾಡುವ ಮೂಲಕ ಮತಯಾಚನೆ ಮಾಡಿದರು. ಸಭೆಯಲ್ಲಿ ಛಲವಾದಿ ಮಹಾಸಭಾದ ಅಧ್ಯಕ್ಷ ಡಾ. ರಾಮಣ್ಣ ಗೊನವಾರ, ಮಾದಿಗ ಮಹಾಸಭಾದ ಅಧ್ಯಕ್ಷ ಮರಿಯಪ್ಪ ಜಾಲಿಹಾಳ, ಅಯ್ಯಪ್ಪ ವಕೀಲರು ಮಲ್ಲಾಪೂರ, ಆರ್.ಅಂಬ್ರೋಸ್, ಶರಣಬಸವ ಮಲ್ಲಾಪುರ ಸೇರಿದಂತೆ ಹಾಗೂ ಮಾದಿಗ ಮತ್ತು ಚಲವಾದಿ ಸಮಾಜದ ಹಿರಿಯ ಮುಖಂಡರು ಉಪಸ್ಥಿತರಿದ್ದರು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *