ಮಸ್ಕಿ : ಬಿಜೆಪಿಯಿಂದ ಸೋಲಿನ ಆತ್ಮಾವಲೋಕನ ಸಭೆ

Spread the love

ನಮ್ಮ ಸಿಂಧನೂರು, ಜೂನ್ 10
ಮಸ್ಕಿ ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿನ ಕುರಿತು ಆತ್ಮಾವಲೋಕನ ಸಭೆ ಸೋಮವಾರ ನಡೆಯಿತು. ಪರಾಜಿತ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಮಾತನಾಡಿ, ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಎಡಬಿಡದೇ ಕಾರ್ಯನಿರ್ವಹಿಸಿದ್ದನ್ನು ಸ್ಮರಿಸಿ, ಧನ್ಯವಾದಗಳನ್ನು ಅರ್ಪಿಸಿದರು. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಮುಖಂಡರಾದ ಬಸವಂತರಾಯ ಕುರಿ, ನಿಕಟಪೂರ್ವ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ವಿಶ್ವನಾಥ್ ರೆಡ್ಡಿ ಅಮೀನಗಡ, ಮಲ್ಲಪ್ಪ ಅಂಕುಶದೊಡ್ಡಿ ಮಾತನಾಡಿದರು. ಮಂಡಲ ಅಧ್ಯಕ್ಷ ಶರಣಬಸವ ಸೊಪ್ಪಿಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ್ ರಾಜ್‌ಗುರು, ಅಭಿಜಿತ್ ಮಾಲಿ ಪಾಟೀಲ್, ಮಂಡಲದ ಎಲ್ಲಾ ಮೋರ್ಚಾ ಅಧ್ಯಕ್ಷರು ಹಾಗೂ ಪುರಸಭೆ ಸದಸ್ಯರು, ಬಿಜೆಪಿ ಹಿರಿಯ ಮುಖಂಡರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Namma Sindhanuru Click For Breaking & Local News
Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *