ಕೊಪ್ಪಳ ಲೋಕ ಕಣ: ಬಿಜೆಪಿಯಿಂದ ‘ನಾರಿಶಕ್ತಿ’ ಬಲ ಪ್ರದರ್ಶನ

Spread the love

ನಮ್ಮ ಸಿಂಧನೂರು, ಏಪ್ರಿಲ್ 13
ಕೊಪ್ಪಳ ಲೋಕಸಭೆ ಚುನಾವಣೆ ಮತದಾನಕ್ಕೆ ಇನ್ನೂ 24 ದಿನ ಬಾಕಿ ಇರುವ ಬೆನ್ನಲ್ಲೇ ಬಿಜೆಪಿ ಕೊಪ್ಪಳದಲ್ಲಿ ನಾರಿಶಕ್ತಿ ಬಲ ಪ್ರದರ್ಶನಕ್ಕೆ ಮುಂದಾಗಿದೆ. ಶನಿವಾರ ನಡೆದ ಬೃಹತ್ ಸಭೆಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಸುಕನ್ಯಾ ಸಮೃದ್ಧಿ, ಭೇಟಿ ಬಚಾವೋ ಭೇಟಿ ಪಡಾವೋ, ಉಜ್ವಲಾ, ಮಾತೃ ವಂದನಾ ಸೇರಿದಂತೆ ಹಲವು ಯೋಜನೆಗಳ ಕುರಿತು ಮಹಿಳಾ ಕಾರ್ಯಕರ್ತರಿಗೆ, ಮತದಾರರಿಗೆ ಜಾಗೃತಿ ಮೂಡಿಸಲಾಯಿತು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಹೇಮಲತಾ ನಾಯಕ ಹಾಗೂ ಉಭಯ ಪಕ್ಷಗಳ ಮಹಿಳಾ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *