ಕೊಪ್ಪಳ ಲೋಕಸಭಾ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌ರಿಂದ ಮಠ, ದೇವಸ್ಥಾನ ಭೇಟಿ

Spread the love

Namma Sindhanuru Click For Breaking & Local News

(ಕ್ವಿಕ್ ನ್ಯೂಸ್ : ಬಸವರಾಜ ಹಳ್ಳಿ)
ನಮ್ಮ ಸಿಂಧನೂರು, ಮಾರ್ಚ್ 20
ಕೊಪ್ಪಳ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದ್ದೇ ತಡ ಫುಲ್ ಆಕ್ಟಿವ್ ಆಗಿರುವ ರಾಜಶೇಖರ ಹಿಟ್ನಾಳ್ ಅವರು ಕಾರ್ಯಕರ್ತರು, ಬೆಂಬಲಿಗರು ಹಾಗೂ ಅಭಿಮಾನಿಗಳೊಂದಿಗೆ ಬುಧವಾರ ಬೆಳಿಗ್ಗೆಯಿಂದಲೇ ಹಲವು ದೇವಸ್ಥಾನ, ಮಠಗಳಿಗೆ ಭೇಟಿ ನೀಡಿದರು. ಕೊಪ್ಪಳದ ಗವಿಸಿದ್ಧೇಶ್ವರ ಮಠದ ಅಭಿನವ ಗವಿಶ್ರೀಗಳ ಆಶೀರ್ವಾದ ಪಡೆದ ಅವರು, ನಂತರ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕನಕಗಿರಿಯ ಕನಕಾಚಲಪತಿ ಸ್ವಾಮಿಯ ದರ್ಶನ ಮಾಡಿಕೊಂಡು, ಶ್ರೀ ಸುವರ್ಣಗಿರಿ ಸಂಸ್ಥಾನ ವಿರಕ್ತ ಮಠದ ಶ್ರೀ ಚನ್ನಮಲ್ಲ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಅವರೊಂದಿಗೆ ಕನಕಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ಸ್ವಾಮಿ ಕಲ್ಬಾಗಿಲ ಮಠ, ಜಿ.ಪಂ.ಮಾಜಿ ಸದಸ್ಯರಾದ ವೀರೇಶ ಸಮಗಂಡಿ, ಅಮರೇಶ ಗೋನಾಳ ಸೇರಿದಂತೆ ಅನೇಕರು ಇದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *