ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾಗಿ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಅಧಿಕಾರ ಸ್ವೀಕಾರ

Spread the love

ನಮ್ಮ ಸಿಂಧನೂರು, ಫೆಬ್ರವರಿ 02
ಮಸ್ಕಿ ತಾಲೂಕಿನ ಶಾಸಕರಾದ ಆರ್.ಬಸವನಗೌಡ ತುರ್ವಿಹಾಳ ಅವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನೂತನ ಅಧ್ಯಕ್ಷರಾಗಿ ಶುಕ್ರವಾರ (ಫೆ.2, 2024) ಅಧಿಕಾರ ಸ್ವೀಕರಿಸಿದರು.

Namma Sindhanuru Click For Breaking & Local News

ನೂತನ ಅಧ್ಯಕ್ಷರಿಗೆ ಸಿಂಧನೂರಿನ ಶಾಸಕ ಹಂಪನಗೌಡ ಬಾದರ್ಲಿ, ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಕಾಂಗ್ರೆಸ್ ಮುಖಂಡರಾದ ಎ.ವಸಂತ ಕುಮಾರ್, ಮಾಜಿ ಎಮ್ಮೆಲ್ಸಿ ಬಸವರಾಜ ಪಾಟೀಲ್ ಇಟಗಿ, ಶಿವನಗೌಡ ಗೊರೇಬಾಳ ಸೇರಿದಂತೆ ಮಸ್ಕಿ, ಸಿಂಧನೂರು ತಾಲೂಕು ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು. ನೂತನ ಅಧ್ಯಕ್ಷರಿಗೆ ಸಿಂಧನೂರು, ಮಸ್ಕಿ ತಾಲೂಕು ಸೇರಿದಂತೆ ಜಿಲ್ಲೆಯ ಇತರೆ ತಾಲೂಕಿನ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೂಗುಚ್ಚ ನೀಡಿ ಅಭಿನಂದಿಸಿದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *