ಸಿಂಧನೂರು : ಬಾದರ್ಲಿ, ವಳಬಳ್ಳಾರಿ, ಅಲಬನೂರಿನಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ

Spread the love

ನಮ್ಮ ಸಿಂಧನೂರು, ಎಪ್ರಿಲ್ 26
ಕೊಪ್ಪಳ ಲೋಕಸಭಾ ಚುನಾವಣೆಗೆ ಇನ್ನೇನು 11 ದಿನಗಳು ಬಾಕಿ ಉಳಿದಿರುವ ಬೆನ್ನಲ್ಲೇ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಮತ್ತವರ ತಂಡ ಸಿಂಧನೂರು ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಭರ್ಜರಿ ಪ್ರಚಾರಕ್ಕೆ ಮುಂದಾಗಿದೆ. ಬಾದರ್ಲಿ, ವಳಬಳ್ಳಾರಿ ಹಾಗೂ ಅಲಬನೂರು ಗ್ರಾಮಗಳಲ್ಲಿ ಸರಣಿಯೋಪಾದಿಯಲ್ಲಿ ಸಭೆಗಳನ್ನು ನಡೆಸುವ ಮೂಲಕ ಮತಯಾಚನೆ ಮಾಡಲಾಯಿತು. ರಾಜಶೇಖರ ಹಿಟ್ನಾಳ್ ಪರ ಪ್ರಚಾರದ ವೇಳೆ ಹಾಲುಮತ ಸಮುದಾಯದವರು ಬಸನಗೌಡ ಬಾದರ್ಲಿ ಅವರಿಗೆ ಕಂಬಳಿ ಹೊದಿಸಿ, ಕುರಿಯನ್ನು ಕಾಣಿಕೆಯಾಗಿ ನೀಡಿದ್ದು ಗಮನ ಸೆಳೆಯಿತು. ಈ ಸಂದರ್ಭದಲ್ಲಿ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಹಾಗೂ ಮತದಾರರು ಇದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *