ಸಿಂಧನೂರು: ಹಳ್ಳದಲ್ಲಿ ಮೊಸಳೆ ಪ್ರತ್ಯಕ್ಷ, ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾನರ್ ಅಳವಡಿಕೆ

Spread the love

ನಮ್ಮ ಸಿಂಧನೂರು, ಸೆಪ್ಟೆಂಬರ್ 10
ನಗರದ ಸುಕಾಲಪೇಟೆ ಪಕ್ಕದಲ್ಲಿರುವ ಹಳ್ಳದಲ್ಲಿ ಭಾನುವಾರ ಮೊಸಳೆಯೊಂದು ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಪ್ರಾದೇಶಿಕ ವಲಯ ಮಾನ್ವಿ ವತಿಯಿಂದ ಮೊಸಳೆ ಪ್ರತ್ಯಕ್ಷವಾದ ಪ್ರದೇಶದಲ್ಲಿ “ಈ ಹಳ್ಳದಲ್ಲಿ ಮೊಸಳೆಗಳು ಇವೆ. ಯಾರೂ ಹಳ್ಳದಲ್ಲಿ ಇಳಿಯಬಾರದು” ಎಂಬ ಸಂದೇಶದ ಬ್ಯಾನರ್‌ವೊಂದನ್ನು ಅಳವಡಿಸಲಾಗಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಭಾನುವಾರ ಹಳ್ಳದಲ್ಲಿ ಪ್ರತ್ಯಕ್ಷವಾಗಿ ಮೊಸಳೆ ಕುರಿಯೊಂದನ್ನು ಬಲಿ ಪಡೆದಿತ್ತು. ಈ ಬಗ್ಗೆ ಕುರಿಗಾಹಿಯೊಬ್ಬರಿಂದ ಮಾಹಿತಿ ಪಡೆದಿದ್ದ ನಮ್ಮ ಕರ್ನಾಟಕ ಸೇನೆಯ ತಾಲೂಕು ಘಟಕದ ಮುಖಂಡರು ಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಅಲ್ಲದೇ ತಾಲೂಕಾ ಅರಣ್ಯಾಧಿಕಾರಿ ಅರುಣಾ ಅವರ ಮೂಲಕ ಪ್ರಾದೇಶಿಕ ವಲಯ ಅರಣ್ಯಾಧಿಕಾರಿಗಳಿಗೆ ಮನವಿ ರವಾನಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಬ್ಯಾನರ್ ಅಳವಡಿಸಲಾಗಿದೆ.


Spread the love

Leave a Reply

Your email address will not be published. Required fields are marked *