ಸಿಂಧನೂರು : ಬಿಜೆಪಿ ಅಭ್ಯರ್ಥಿ ಕ್ಯಾವಟರ್ ಪರ ಸಿ.ಟಿ.ರವಿ ಪ್ರಚಾರ

Spread the love

ನಮ್ಮ ಸಿಂಧನೂರು, ಎಪ್ರಿಲ್ 30
ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರ ಪರ ಪ್ರಚಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರ, ಬೆಂಬಲಿಗರ ಹಾಗೂ ಅಭಿಮಾನಿಗಳ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲು ಕರೆ ನೀಡಿದರು. ಈ ಸಂದರ್ಭದಲ್ಲಿ ಕಾಡಾ ಮಾಜಿ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್, ಮಾಜಿ ಸಂಸದ ಸಂಸದರಾದ ಶಿವರಾಮಗೌಡ, ಮುಖಂಡರಾದ ಕೆ.ಕರಿಯಪ್ಪ, ಜಿ.ಪಂ.ಮಾಜಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಮಧ್ವರಾಜ್ ಆಚಾರ್ಯ, ಬಿ. ಹರ್ಷ ಸೇರಿದಂತೆ ಇನ್ನಿತರರಿದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *