ಸಿಂಧನೂರು: ಮೂರು ಮೈಲ್‌ಕ್ಯಾಂಪ್‌ನಲ್ಲಿ ಕೊಲೆ, ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ

Spread the love

ನಮ್ಮ ಸಿಂಧನೂರು, ಸೆಪ್ಟೆಂಬರ್ 09
ನಗರದ ಮೂರುಮೈಲ್ ಕ್ಯಾಂಪ್ ಬಳಿ ಶನಿವಾರ ರಾತ್ರಿ ವ್ಯಕ್ತಿಯೊಬ್ಬರ ಕೊಲೆಯಾಗಿದ್ದು, ಘಟನಾ ಸ್ಥಳಕ್ಕೆ ರಾಯಚೂರು ಜಿಲ್ಲಾ ಎಸ್ಪಿ ಪುಟ್ಟಮಾದಯ್ಯ ಅವರು ರಾತ್ರಿಯೇ ಭೇಟಿ ನೀಡಿ, ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ, ಡಿವೈಎಸ್‌ಪಿ ಬಿ.ಎಸ್.ತಳವಾರ ಇದ್ದರು. ಮೂರುಮೈಲ್‌ಕ್ಯಾಂಪ್‌ನ ನಿವಾಸಿ ವೀರಬಸಪ್ಪ (60) ಕೊಲೆಯಾದ ವ್ಯಕ್ತಿ. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿರುವುದು ತಿಳಿದುಬಂದಿದೆ.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *