Spread the love

ನಮ್ಮ ಸಿಂಧನೂರು, ಎಪ್ರಿಲ್ 21
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ನೇಹಾ ಹಿರೇಮಠ ಬರ್ಬರ ಕೊಲೆ ಘಟನೆ ಖಂಡಿಸಿ, ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ, ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಏ.22 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಟಿ.ಪಂಪನಗೌಡ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಯ ಗಣೇಶ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಬಸವೇಶ್ವರ ವೃತ್ತದ ಮೂಲಕ ಗಾಂಧಿ ವೃತ್ತಕ್ಕೆ ತೆರಳಿ ರಸ್ತೆ ಸಂಚಾರ ತಡೆ ಮಾಡಲಾಗುವುದು. ನಂತರ ತಹಸೀಲ್ದಾರ್ ಅವರ ಮೂಲಕ ರ‍್ಕಾರಕ್ಕೆ ಮನವಿಪ್ರ ರವಾನಿಸಲಾಗುವುದು. ಈ ಪ್ರತಿಭಟನೆಯಲ್ಲಿ ಅಂದಾಜು 2 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ವೇದಿಕೆಯ ಮುಖಂಡರಾದ ವೀರೇಶ ಯಡಿಯೂರಮಠ, ಆದಿಬಸವ, ಸಿದ್ರಾಮೇಶ ಮನ್ನಾಪುರ, ರವಿ ಹಿರೇಮಠ, ಸಿದ್ದಲಿಂಗೇಶ್ವರ, ಉಮೇಶಗೌಡ ಅರಳಹಳ್ಳಿ, ಅಮರೇಗೌಡ ಮಲ್ಲಾಪುರ, ಮಂಜುನಾಥ ಗಾಣಗೇರ ಇನ್ನಿತರರಿದ್ದರು.


Spread the love

Leave a Reply

Your email address will not be published. Required fields are marked *