ಸಿಂಧನೂರು: ನಮ್ಮ ಕರ್ನಾಟಕ ಸೇನೆಯಿಂದ ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟನೆ, ಎಮ್ಮೆಲ್ಸಿ, ಎಸಿಗೆ ಮನವಿ

Spread the love

ನಮ್ಮ ಸಿಂಧನೂರು, ಸೆಪ್ಟೆಂಬರ್ 07
ನಗರದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ಕರ್ತವ್ಯಲೋಪ, ಸಮಯಪಾಲನೆ ಮಾಡದೇ ಇರುವುದು ಹಾಗೂ ಅವ್ಯವಸ್ಥೆಯನ್ನು ಖಂಡಿಸಿ ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿ ಎಮ್ಮೆಲ್ಸಿ ಬಸನಗೌಡ ಬಾದರ್ಲಿ, ಸಹಾಯಕ ಆಯುಕ್ತ ಬಸವಣ್ಣಪ್ಪ ಕಲ್‌ಶೆಟ್ಟಿ, ತಹಸೀಲ್ದಾರ್ ಅರುಣಕುಮಾರ ದೇಸಾಯಿ ಹಾಗೂ ಜಿಲ್ಲಾ ಕ್ಷಯರೋಗ ಅಧಿಕಾರಿ ಜಾಕೀರ ಹುಸೇನ್ ಅವರಿಗೆ ಮನವಿಪತ್ರ ಸಲ್ಲಿಸಿದರು.

Namma Sindhanuru Click For Breaking & Local News
ಸಿಂಧನೂರಿನಲ್ಲಿ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ತಾಲೂಕು ಅಧ್ಯಕ್ಷ ಮಂಜುನಾಥ ಗಾಣಗೇರ, ರಾಜ್ಯ ಕಾರ್ಯಾಧ್ಯಕ್ಷ ಉಮೇಶಗೌಡ ಗುಂಜಳ್ಳಿ ನೇತೃತ್ವದಲ್ಲಿ ಸರ್ಕಾರಿ ಆಸ್ಪತ್ರೆಯ ಮುಂದೆ ಮಳೆಯಲ್ಲೇ ಪ್ರತಿಭಟನೆ ನಡೆಸಿದರು.

ಮನವಿಪತ್ರ ನೀಡಲು ಮುಂದಾದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರನ್ನು ತಡೆಯೊಡ್ಡಿದ ಹಿನ್ನೆಲೆಯಲ್ಲಿ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಗಾಣಗೇರ ಹಾಗೂ ರಾಜ್ಯ ಘಟಕದ ಉಮೇಶಗೌಡ ಅರಳಹಳ್ಳಿ ನೇತೃತ್ವದಲ್ಲಿ ಕಾರ್ಯಕರ್ತರು ಆಸ್ಪತ್ರೆಯ ಮುಂದೆ ಮಳೆಯಲ್ಲೇ ಪ್ರತಿಭಟನೆ ನಡೆಸಿದರು. ಡಿಎಚ್‌ಒ ಅವರು ಆಗಮಿಸಿ ಮನವಿಪತ್ರ ಸ್ವೀಕರಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು, ಆದರೆ ಡಿಎಚ್‌ಒ ಅವರು ಆಗಮಿಸದ ಹಿನ್ನೆಲೆಯಲ್ಲಿ ಕ್ಷಯ ರೋಗ ಅಧಿಕಾರಿ ಜಾಕೀರ್ ಹುಸೇನ್ ಅವರಿಗೂ ಮನವಿಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಯುವ ಘಟಕ ಪ್ರಧಾನ ಕಾರ್ಯದರ್ಶಿ ಬೂದೇಶ ಮರಾಠ, ಜಿಲ್ಲಾ ಸಂಚಾಲಕ ಹುಸೇನ್‌ಬಾಷಾ ಇಂದಿರಾನಗರ, ಜಿಲ್ಲಾ ಉಪಾಧ್ಯಕ್ಷ ಪಿ.ರಾಘವೇಂದ್ರ, ಅಶೋಕ, ಮಹ್ಮದ್‌ ಹುಸೇನ್‌, ಸದ್ದಾಂ, ಸುರೇಶ,ಅಮರೇಶ, ನಬಿ ಹಾಗೂ ಸಂಘಟನೆಯ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಇನ್ನಿತರರು ಇದ್ದರು.


Spread the love

Leave a Reply

Your email address will not be published. Required fields are marked *