ಸಿಂಧನೂರು: ಭದ್ರಾ ಡ್ಯಾಮಿನಿಂದ ತುಂಗಭದ್ರಾ ಡ್ಯಾಮಿಗೆ ನೀರು ಹರಿಸಲು ಸಿಎಂಗೆ ಮನವಿ

Spread the love

ಲೋಕಲ್ ನ್ಯೂಸ್: ಬಸವರಾಜ ಹಳ್ಳಿ
ನಮ್ಮ ಸಿಂಧನೂರು, ಮಾರ್ಚ್ 26

ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಹಿನ್ನೆಲೆಯಲ್ಲಿ ಹಾಗೂ ಎರಡನೆ ಬೆಳೆಗೆ ನೀರಿನ ಕೊರತೆ ಉಂಟಾಗಿದ್ದು ಹಾಗಾಗಿ ಭದ್ರಾ ಜಲಾಶಯದಿಂದ ನದಿಯ ಮೂಲಕ ತುಂಗಭದ್ರಾ ಡ್ಯಾಮಿಗೆ ನೀರು ಹರಿಸುವಂತೆ ನಾಲ್ಕು ಜಿಲ್ಲೆಗಳ ಶಾಸಕರು, ಸಂಸದರು ಹಾಗೂ ಚುನಾಯಿತ ಪ್ರತಿನಿಧಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ಸಿಎಂ ಅವರ ಬಳಿ ನಿಯೋಗ ತೆರಳಿದ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಐಸಿಸಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ, ಶಾಸಕರಾದ ಹಂಪನಗೌಡ ಬಾದರ್ಲಿ, ಬಿ.ಎಂ.ನಾಗರಾಜ, ಬಸನಗೌಡ ದದ್ದಲ್, ಆರ್.ಬಸನಗೌಡ ತುರ್ವಿಹಾಳ, ಎಮ್ಮೆಲ್ಸಿ ಶರಣಗೌಡ ಪಾಟೀಲ್ ಬಯ್ಯಾಪುರ, ಸಂಸದ ರಾಜಶೇಖರ ಹಿಟ್ನಾಳ್, ಮಾಜಿ ಶಾಸಕ ಚಂದ್ರಶೇಖರಯ್ಯ ಸೇರಿದಂತೆ ಇನ್ನಿತರರಿದ್ದರು.

Namma Sindhanuru Click For Breaking & Local News

ಸಚಿವ ಮಧು ಬಂಗಾರಪ್ಪರನ್ನು ಭೇಟಿ ಮಾಡಿದ ಬಾದರ್ಲಿ
ಬೇಸಿಗೆಯ ಕಾರಣ ನೀರಿನ ಸಮಸ್ಯೆ ಉಂಟಾಗುವ ಹಿನ್ನೆಲೆಯಲ್ಲಿ ಭದ್ರಾದಿಂದ ತುಂಗಭದ್ರಾ ಡ್ಯಾಮಿಗೆ ನೀರು ಹರಿಸುವ ಕುರಿತಂತೆ ಶಾಸಕ ಹಂಪನಗೌಡ ಬಾದರ್ಲಿ ಅವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಕೆಲವೊತ್ತು ಚರ್ಚಿಸಿ, ನೀರಿನ ಕೊರತೆಯಿಂದ ರೈತರಿಗೆ ಎದುರಾಗಿರುವ ಸಮಸ್ಯೆಯನ್ನು ಮನವರಿಕೆ ಮಾಡಿದ್ದಾರೆ. ಈ ವೇಳೆ ಸಚಿವ ಶಿವರಾಜ್ ಎಸ್.ತಂಗಡಗಿ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ ಇನ್ನಿತರರಿದ್ದರು.


Spread the love

Leave a Reply

Your email address will not be published. Required fields are marked *