ಸಿಂಧನೂರು : ಟಿಯುಸಿಐನಿಂದ ಕಾರ್ಮಿಕ ದಿನ ಆಚರಣೆ

Spread the love

ನಮ್ಮ ಸಿಂಧನೂರು, ಮೇ 1
ನಗರದ ಎಪಿಎಂಸಿಯ ಶ್ರಮಿಕ ಭವನದಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಹಾಗೂ ಶ್ರಮಜೀವಿ ಎಪಿಎಂಸಿ ಹಮಾಲರ ಸಂಘ (ಟಿಯುಸಿ) ವತಿಯಿಂದ ವಿಶ್ವ ಬುಧವಾರ ಕಾರ್ಮಿಕ ದಿನವನ್ನು ಆಚರಿಸಲಾಯಿತು. ಮುಖಂಡರಾದ ಚಿನ್ನಪ್ಪ ಕೊಟ್ರಕಿ ಅವರು ಮಾತನಾಡಿ, ಬಿಜೆಪಿ ಸರ್ಕಾರ ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಗೊಳಿಸುವ ಮೂಲಕ ದಮನಕಾರಿ ನೀತಿಗಳನ್ನು ಜಾರಿಗೆ ತಂದಿದ್ದು, ಈ ನೀತಿಗಳ ವಿರುದ್ಧ ಕಾರ್ಮಿಕರು ಒಗ್ಗೂಡಿ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಹಮಾಲರ ಸಂಘದ ಅಧ್ಯಕ್ಷ ಮಾಬುಸಾಬ ಬೆಳ್ಳಟ್ಟಿ, ನಾಗಪ್ಪ ಉಮಲೂಟಿ, ತಿಮ್ಮಣ್ಣ ಯಾದವ್ ಸೇರಿದಂತೆ ಇನ್ನಿತರ ಮುಖಂಡರು, ಸಂಘದ ಪದಾಧಿಕಾರಿಗಳು, ಕಟ್ಟಡ ಕಾರ್ಮಿಕ ಸಂಘದ ಪದಾಧಿಕಾರಿಗಳು, ಹಮಾಲರು ಇದ್ದರು.

Namma Sindhanuru Click For Breaking & Local News

Spread the love

Leave a Reply

Your email address will not be published. Required fields are marked *