ಮಸ್ಕಿ: ಮಾರಲದಿನ್ನಿ ಡ್ಯಾಮಿಗೆ (ಮಸ್ಕಿ ಜಲಾಶಯ) ಶಾಸಕರಿಂದ ಬಾಗಿನ ಅರ್ಪಣೆ

Spread the love

ನಮ್ಮ ಸಿಂಧನೂರು, ಆಗಸ್ಟ್ 20
ಮಸ್ಕಿ ತಾಲೂಕಿನ ಮಾರಲದಿನ್ನಿ ಬಳಿಯಿರುವ ಜಲಾಶಯಕ್ಕೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಮಂಗಳವಾರ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಜಲಾಶಯದ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು. ಜಲಾನಯನ ಪ್ರದೇಶ ಸೇರಿದಂತೆ, ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಳ್ಳಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾದ ಕಾರಣ ವ್ಯಾಪಕ ಪ್ರಮಾಣದ ನೀರು ಜಲಾಶಯಕ್ಕೆ ಹರಿದು ಬರುತ್ತಿದ್ದು, ಈಗಾಗಲೇ ಎರಡು ಗೇಟ್‌ಗಳ ಮೂಲಕ ಹಳ್ಳಕ್ಕೆ 500 ಕ್ಯೂಸೆಕ್‌ನಷ್ಟು ನೀರನ್ನು ಹರಿಬಿಡಲಾಗಿದೆ. 0.5 ಟಿಎಂಸಿ ಸಾಮರ್ಥ್ಯದ ಮಿನಿ ಡ್ಯಾಮು ಶನಿವಾರವೇ ಭರ್ತಿಯಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಸಂತಸ ಮನೆ ಮಾಡಿದೆ.


Spread the love

Leave a Reply

Your email address will not be published. Required fields are marked *